ಸುರೇಶ್ ಭಂಡಾರಿ ಸಾರಥ್ಯದ ಶ್ರೀ ಸಾಯಿಬಾಬಾ-ಶ್ರೀ ಸತ್ಯನಾರಾಯಣ ಮಹಾಪೂಜೆ

(ಚಿತ್ರ / ವರದಿ: ರೋನ್ಸ್ ಬಂಟ್ವಾಳ್)

ಮುಂಬಯಿ, ಜ.25, 2018: ದಕ್ಷಿಣ ಮುಂಬಯಿ ಕೊಲಾಬಾ ಕಫ್‍ಪರೇಡ್ ಪರಿಸರದಲ್ಲಿ ಕಳೆದ ಸುಮಾರು ಮೂವತ್ತು ವರ್ಷಗಳಿಂದ ಸಾಮಾಜಿಕ ಮತ್ತು ಧಾರ್ಮಿಕ ಸೇವೆಗಳೊಂದಿಗೆ ಸಕ್ರೀಯವಾಗಿ ಸೇವಾ ನಿರತ ವಾರ್ಷಿಕ `ಕೊಲಾಬಾ ಜಾತ್ರೆ' ಎಂದೇ ಜನಜನಿತ ಶ್ರೀ ಸಾಯಿನಾಥ ಮಿತ್ರ ಮಂಡಳಿ (ರಿ.) ಸಂಸ್ಥೆಯ ತ್ರಿದಶಕ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ಶ್ರೀ ಸಾಯಿಬಾಬಾ ಪೂಜೆ ಕಳೆದ ಗುರುವಾರ ಸಂಜೆ ಕಪ್ ಪರೇಡ್‍ನ ಸಾಯಿಸದನ್‍ನಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

 

 

 

 

ಸಾಯಿನಾಥ್ ಮಿತ್ರ ಮಂಡಳ್ ಕಪ್‍ಪರೇಡ್ ಮುಂಬಯಿ ಸಂಸ್ಥೆಯ ಸಂಸ್ಥಾಪಕಾಧ್ಯಕ್ಷ, ಮನಿಫೋಲ್ಡ್ ಕೋ.ಅಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‍ನ ಕಾರ್ಯಾಧ್ಯಕ್ಷ, ನಾಗೇಶ್ವರ ಸಿನಿ ಕ್ರಿಯೇಷನ್ಸ್‍ನ ಆಡಳಿತ ನಿರ್ದೇಶಕ, ಚಲನಚಿತ್ರ ನಿಮಾಪಕ ಕಡಂದಲೆ ಸುರೇಶ್ ಎಸ್.ಭಂಡಾರಿ ಸಂಸ್ಥಾಪಣೆಯ ಶ್ರೀ ಸಾಯಿನಾಥ ಮಿತ್ರ ಮಂಡಳಿ ಏರ್ಪಾಡಿಸಿದ್ದ ವಾರ್ಷಿಕ ಮಹಾಪೂಜೆಯನ್ನು ಭಾಂಡೂಪ್ ಪಶ್ಚಿಮದ ಶ್ರೀ ನಿತ್ಯಾನಂದ ಮಂದಿರದ ಪ್ರಧಾನ ಅರ್ಚಕ ವಿದ್ವಾನ್ ಶ್ರೀ ಲಕ್ಷಿ ್ಮೀ ನಾರಾಯಣ ಭಟ್ ವಿಧಿವತ್ತಾಗಿ ನೆರವೇರಿಸಿದರು.

ಶ್ರೀ ಸಾಯಿ ಅಭಿಷೇಕ ಮತ್ತು ಹೋಮ, ಶ್ರೀ ಸತ್ಯನಾರಾಯಣ ಮಹಾಪೂಜೆ, ಸಾಯಿ ಮಹಾರತಿ, ಇತ್ಯಾದಿ ಪೂಜಾಧಿಗಳೊಂದಿಗೆ ನೆರವೇರಿ ತೀರ್ಥ ಪ್ರಸಾದ ವಿತರಿಸಿ ನೆರದ ಭಕ್ತಾಭಿಮಾನಿಗಳಿಗೆ ಅನುಗ್ರಹಿಸಲಾಯಿತು. ಕಡಂದಲೆ ಸುರೇಶ್ ಎಸ್.ಭಂಡಾರಿ, ಶೋಭಾ ಸುರೇಶ್ ಭಂಡಾರಿ, ಮಾ| ಸೌರಭ್ ಎಸ್.ಭಂಡಾರಿ ಮತ್ತು ಮೇಘಾ ಎಸ್.ಭಂಡಾರಿ ಪೂಜಾಧಿಗಳ ಯಜಮಾನತ್ವ ವಹಿಸಿದರು.

ಈ ಸಂದರ್ಭದಲ್ಲಿ ಬಂಟ್ಸ್ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಪ್ರಭಾಕರ ಎಲ್.ಶೆಟ್ಟಿ, ಮಾಜಿ ಮಹಿಳಾ ವಿಭಾಧ್ಯಕ್ಷೆ  ಲತಾ ಪಿ.ಶೆಟ್ಟಿ, ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ ಮಾಜಿ ಅಧ್ಯಕ್ಷ ಬಾಲಕೃಷ್ಣ ಪಿ.ಭಂ ಡಾರಿ, ಶಿವಾ'ಸ್ ಹೇರ್ ಡಿಝೈನರ್ಸ್ ಪ್ರೈವೇಟ್ ಲಿಮಿಟೆಡ್‍ನ ಆಡಳಿತ ನಿರ್ದೇಶಕ ಡಾ| ಶಿವರಾಮ ಕೆ.ಭಂಡಾರಿ ಅತ್ತೂರು, ಗುಲಾಬಿ ಕೃಷ್ಣ ಭಂಡಾರಿ, ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಅನುಶ್ರೀ ಶಿವರಾಮ  ಭಂಡಾರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಆಗಮಿಸಿದ ಸರ್ವ ಸಾಯಿ ಭಕ್ತರನ್ನು ಗೌರವಿಸಿದರು. ವಾರ್ಷಿಕ ಕಾರ್ಯಕ್ರಮದಲ್ಲಿ ಅತ್ಯಾಕರ್ಷಕ ಮಹಾದ್ವಾರ, ಆರ್ಕೇಸ್ಟ್ರಾ ಸದ್ಭಕ್ತರ ಮನಾಕರ್ಷಿಸುತಿತ್ತು.

 

 

 

Latest News

Copyright © 2016 - www.kadandalesureshbhandary.com. Powered by eCreators

Home | About Us | NewsSitemap | Contact